Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:35 - ಕನ್ನಡ ಸಮಕಾಲಿಕ ಅನುವಾದ

35 ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಸಗ್ಳೆ ಖರೆಚ್! ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಅಪ್ನಾಚಿ ಖಬರ್ ದಿವ್ನ್ ಧಾಡಲ್ಲ್ಯಾಕ್ನಿ ತುಮಿ ದೆವಾ ಸರ್ಕೆ ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:35
27 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


ನಿಯಮದ ಒಂದು ಚುಕ್ಕೆಯು ಬಿದ್ದುಹೋಗುವುದಕ್ಕಿಂತ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು


ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.


“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ?


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?


ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?


“ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಯೆಹೋವ ದೇವರು ಯೇಹುವಿಗೆ ಹೇಳಿದ ವಾಕ್ಯದಂತೆ ಇವೆಲ್ಲವೂ ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು