Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:6 - ಕನ್ನಡ ಸಮಕಾಲಿಕ ಅನುವಾದ

6 ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಉಪಮಾನವನ್ನು ಯೇಸು ಅವರಿಗೆ ಹೇಳಿದನು; ಆದರೂ ಆತನ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಹೇಳಿದ ಈ ಸಾಮ್ಯದ ಅರ್ಥವನ್ನು ಜನರು ಗ್ರಹಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆಜುನ್ ಹಿ ಕಾನಿ ತೆಂಕಾ ಸಾಂಗಟ್ಲ್ಯಾನ್ ಹೊಯ್, ಖರೆ ತೆಂಕಾ ಕಾಯ್ಬಿ ಕಳುಕ್‍ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:6
20 ತಿಳಿವುಗಳ ಹೋಲಿಕೆ  

ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.


“ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ. ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ.


“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.


ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ಯೇಸು ತಂದೆಯ ವಿಷಯವಾಗಿ ಅವರೊಂದಿಗೆ ಮಾತನಾಡಿದರೆಂದು ಅವರು ತಿಳಿಯಲಿಲ್ಲ.


ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು.


ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.


ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.


ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಆಗ ಶಿಷ್ಯರು ಯೇಸುವಿಗೆ, “ಇಗೋ, ಈಗ ನೀವು ಸಾಮ್ಯಗಳಿಂದ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.


“ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು