Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತುಮ್ಕಾ ಲಾಗುನ್ ಮಿಯಾ ತ್ಯೆಚ್ಯಾ ವಾಂಗ್ಡಾ ನಸಲ್ಲ್ಯಾಸಾಟಿ ಮಾಕಾ ಖುಶಿ ಹೊತಾ, ಅಶೆಚ್ ತುಮಿ ವಿಶ್ವಾಸ್ ಕರ್‍ತ್ಯಾಶಿ. ಚಲಾ ಅಮಿ ಲಾಜರಾಕ್ಡೆ ಜಾಂವ್ವಾ” ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:15
16 ತಿಳಿವುಗಳ ಹೋಲಿಕೆ  

ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.


ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.


ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:


ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.


ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು