Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಜುದೆಯಾತ್ಲಿ ಲೈ ಲೊಕಾ ಅಪ್ನಾಚ್ಯಾ ಭಾವಾಚ್ಯಾ ಮರ್‍ನಾಕ್ ಲಾಗುನ್ ದುಖಾತ್ ಹೊತ್ತ್ಯಾ ಮಾರ್ಥಾಕ್ ಅನಿ ಮರಿಕ್ ಭೆಟುಕ್ ಮನುನ್ ಯೆಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:19
28 ತಿಳಿವುಗಳ ಹೋಲಿಕೆ  

ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.


ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.


ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.


ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.


ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?


ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.


ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.


ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.


ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.


ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.


ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.


ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.


ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,


ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.


ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು