Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:42 - ಕನ್ನಡ ಸಮಕಾಲಿಕ ಅನುವಾದ

42 ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತಿಯಾ ಕನ್ನಾಬಿ ಮಾಜೆ ಆಯಿಕ್ತೆ ಮನುನ್ ಮಾಕಾ ಗೊತ್ತ್ ಹಾಯ್, ಖರೆ ಹ್ಯಾ ಹಿತ್ತೆ ಹೊತ್ತ್ಯಾ ಲೊಕಾಂಚ್ಯಾಸಾಟಿ ಅಶೆಚ್ ಮನುಲಾ, ಅಶೆಚ್ ತೆನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್‍ ವಿಶ್ವಾಸ್ ಕರುಂದಿತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:42
27 ತಿಳಿವುಗಳ ಹೋಲಿಕೆ  

ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.


ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.


“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು,” ಎಂದಳು.


ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.


ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.


ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.


ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.


ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು