Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:19 - ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಫಾರಿಜೆವಾನಿ ಎಕಾಮೆಕಾಕ್ನಿ, “ಬಗಾ ಅಮ್ಚೆನಿ ಕಾಯ್ ಬಿ ಕರುಕ್ ಹೊಯ್ನಾ ಹೊಲಾ! ಸಗ್ಳೊ ಜಗುಚ್ ತ್ಯೆಚ್ಯಾ ಫಾಟ್ನಾ ಜಾವ್ಲಾಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:19
14 ತಿಳಿವುಗಳ ಹೋಲಿಕೆ  

ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.


ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳೇ,


ಯೇಸು ಈ ಸೂಚಕಕಾರ್ಯವನ್ನು ಮಾಡಿದರೆಂದು ಅನೇಕ ಜನರು ಕೇಳಿದ್ದರಿಂದ ಅವರು ಸಹ ಯೇಸುವನ್ನು ಸಂಧಿಸಲು ಬಂದರು.


ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು