Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:40 - ಕನ್ನಡ ಸಮಕಾಲಿಕ ಅನುವಾದ

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ದೆವಾನ್ ತುಮ್ಚೆ ಡೊಳೆ ಕುಡ್ಡೆ ಕರ್‍ಲ್ಯಾನಾಯ್ ಅನಿ ತೆಂಚಿ ಮನಾಂಚಿ ದಾರಾ ಧಾಪ್ಲ್ಯಾನಾಯ್” “ತಸೆಮನುನ್ ತೆಂಚ್ಯಾ ಡೊಳ್ಯಾಕ್ನಿ ದಿಸಿನಾ ಅನಿ ತೆಂಚ್ಯಾ ಮನಾಕ್ನಿ ಕಾಯ್ ಬಿ ಅರ್ತ್ ಹೊಯ್ನಾ ಅನಿ ಮಿಯಾ ತೆಂಕಾ ಗುನ್ ಕರುಕ್ ಮನುನ್ ತೆನಿ ಮಾಜಾಕ್ಡೆ ಪರ್ತುನ್ ಯೆಯ್ನಾತ್ ಮನುನ್ ದೆವ್ ಮನ್ತಾ.” ಮನುನ್ ಬಿ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:40
44 ತಿಳಿವುಗಳ ಹೋಲಿಕೆ  

ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


“ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ.


“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.


“ ‘ಈ ಜನರ ಬಳಿಗೆ ಹೋಗಿ ಹೇಳು, “ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.”


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು.


ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ಯೆಹೋವ ದೇವರು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತನ್ನು ಕೇಳಲಿಲ್ಲ.


ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.


ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.


ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’


ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು