Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:47 - ಕನ್ನಡ ಸಮಕಾಲಿಕ ಅನುವಾದ

47 “ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಯಾವನಾದರೂ ನನ್ನ ಮಾತುಗಳನ್ನು ಕೇಳಿದರೂ ಕೈಕೊಂಡು ನಡೆಯದೆ ಹೋದರೆ ನಾನೇ ಅವನಿಗೆ ತೀರ್ಪುಮಾಡುವದಿಲ್ಲ; ಲೋಕಕ್ಕೆ ತೀರ್ಪುಮಾಡುವದಕ್ಕಾಗಿ ನಾನು ಬಂದಿಲ್ಲ; ಲೋಕವನ್ನು ರಕ್ಷಿಸುವದಕ್ಕಾಗಿ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕೊನ್ ಮಾಜಿ ಗೊಸ್ಟಿಯಾ ಆಯ್ಕುನ್ ತಿ ಪಾಳಿನಾ, ಮಿಯಾ ತೆಚಿ ನಿತ್ ಕರಿನಾ. ಕಶ್ಯಾಕ್ ಮಟ್ಲ್ಯಾರ್ ಜಗಾಚಿ ನಿತ್ ಕರುಕ್ ಮನುನ್ ಮಿಯಾ ಯೆವ್ಕ್ ನಾ, ಜಗಾಕ್ ಹುರ್‍ವುನ್ ಘೆವ್ಕ್ ಮನುನ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:47
13 ತಿಳಿವುಗಳ ಹೋಲಿಕೆ  

ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


“ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು