Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:14 - ಕನ್ನಡ ಸಮಕಾಲಿಕ ಅನುವಾದ

14 ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕರ್ತನೂ ಗುರುವೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದಿರಲಾಗಿ ನೀವು ಸಹ ಒಬ್ಬರ ಕಾಲನ್ನು ಒಬ್ಬರು ತೊಳೆಯುವ ಹಂಗಿನವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆಚ್ಯಾ ಸಾಟ್ನಿ ಮಿಯಾ ತುಮ್ಚ್ಯಾ ಗುರುಜಿನ್ ಅನಿ ಧನಿಯಾನ್ ತುಮ್ಚೆ ಪಾಂಯೆ ಧುಲೊ, ತಸೆಚ್ ತುಮಿಬಿ ಎಕಾಮೆಕಾಚೆ ಪಾಂಯೆ ಧುವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:14
22 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.


ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.


ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು