Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:26 - ಕನ್ನಡ ಸಮಕಾಲಿಕ ಅನುವಾದ

26 ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾಜ್ಯಾ ನಾವಾನ್ ಬಾಬಾನ್ ಧಾಡುನ್ ದಿಲ್ಲೊ ಮಜತ್ ಕರ್‍ತಲೊ ಪವಿತ್ರ್ ಆತ್ಮೊ ಮಿಯಾ ತುಮ್ಕಾ ಸಾಂಗಲ್ಲೆ ಸಗ್ಳೆ ಯಾದ್ ಕರುನ್ ದಿತಾ ಅನಿ ತುಮ್ಕಾ ಸಗ್ಳೆ ಶಿಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:26
75 ತಿಳಿವುಗಳ ಹೋಲಿಕೆ  

“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.


ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.


ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.


ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.


ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ನಿನಗೆ ಒಪ್ಪಿಸಲಾಗಿರುವ ಆ ಒಳ್ಳೆಯದನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮ ದೇವರ ಮೂಲಕ ನೀನು ಕಾಪಾಡು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.


‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.


ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.


ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.


ಪವಿತ್ರಾತ್ಮ ದೇವರು ಸಹ ನಿಮಗೆ ಸಾಕ್ಷಿ ಕೊಡುವವರಾಗಿ,


ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.


ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.


ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.


ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.


ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:


ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಈ ಅಗತ್ಯವಾದವುಗಳನ್ನು ಬಿಟ್ಟು ಬೇರೆಯವುಗಳನ್ನು ನಿಮ್ಮ ಮೇಲೆ ಹೊರೆಯಾಗಿ ಹಾಕಬಾರದೆಂಬುದು, ಪವಿತ್ರಾತ್ಮರಿಗೂ ನಮಗೂ ಒಳ್ಳೆಯದೆಂದು ತೋಚಿತು.


ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.


ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.


ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?


ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.


ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.


ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.


“ನಾನು ಇನ್ನೂ ನಿಮ್ಮೊಡನೆ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು