Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:27 - ಕನ್ನಡ ಸಮಕಾಲಿಕ ಅನುವಾದ

27 ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಶಾಂತಿ ತುಮ್ಚ್ಯಾ ಮದ್ದಿ ಮಿಯಾ ಸೊಡುನ್ ಜಾತಾ, ಹಿ ಮಾಜಿ ಸ್ವತಾಚಿ ಶಾಂತಿ ಮಿಯಾ ತುಮ್ಕಾ ದಿತಾ. ಹ್ಯಾ ಜಗಾನ್ ದಿಲ್ಲ್ಯಾ ಸರ್ಕೆ ಮಿಯಾ ತಿ ತುಮ್ಕಾ ದಿ ನಾ. ಚಿಂತಾ ಕರುನಕಾಶಿ ಅನಿ ತುಮ್ಚಿ ಮನಾ ತಳ್ಮಳಿ ನಸ್ತಾನಾ ರ್‍ಹಾಂವ್ದಿ ಅನಿ ಭಿಂವ್ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:27
65 ತಿಳಿವುಗಳ ಹೋಲಿಕೆ  

ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.


ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.


ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’


ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.


ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.


ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?


ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.


ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.


ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.


ನಮ್ಮ ತಂದೆಯಾದ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.


ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.


ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.


ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ.


“ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.


ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು.


ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,


ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.


ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.


ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.


ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.


“ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.


ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.


ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


“ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ, ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು.


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು