Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:8 - ಕನ್ನಡ ಸಮಕಾಲಿಕ ಅನುವಾದ

8 ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಜಾಸ್ತಿಚಿ ಫಳಾ ದಿಲ್ಲ್ಯಾ ವೈನಾ ಮಾಜ್ಯಾ ಬಾಬಾಚಿ ಮಹಿಮಾ ದಾಕ್ವುನ್ ದಿಲ್ಯಾಶಿ, ಅನಿ ಅಶೆಚ್ ತುಮಿ ಮಾಜಿ ಶಿಸಾ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:8
19 ತಿಳಿವುಗಳ ಹೋಲಿಕೆ  

ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಯಾವುದನ್ನೂ ಕದ್ದಿಟ್ಟುಕೊಳ್ಳದೆ, ನಮ್ಮ ರಕ್ಷಕರಾದ ದೇವರ ಉಪದೇಶವನ್ನು ಎಲ್ಲಾ ವಿಷಯಗಳಲ್ಲಿಯೂ ಅಲಂಕರಿಸುವಂತೆ, ಒಳ್ಳೆಯ ನಂಬಿಗಸ್ತರೆಂದು ಎಲ್ಲದರಲ್ಲಿಯೂ ತೋರಿಸಬೇಕೆಂದು ಅವರನ್ನು ಉಪದೇಶಿಸು.


ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು