Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:33 - ಕನ್ನಡ ಸಮಕಾಲಿಕ ಅನುವಾದ

33 “ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತುಮಿ ಸಗ್ಳೆ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರಾವ್ನ್ ಶಾಂತಿನ್ ರಾವ್ಚೆ ಮನುನ್ ಮಿಯಾ ಹೆ ಸಗ್ಳೆ ತುಮ್ಕಾ ಸಾಂಗಟ್ಲೊ, ಖರೆ ಧೈರೊ ಕರಾ! ಕಶ್ಯಾಕ್ ಮಟ್ಲ್ಯಾರ್ ಮಿಯಾ ಹ್ಯಾ ಜಗಾ ವರ್ತಿ ಜಿಕ್ಲಾ ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:33
46 ತಿಳಿವುಗಳ ಹೋಲಿಕೆ  

ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.


ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ.


ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.


ನಿಮ್ಮ ಮೇಲೆ ನನಗೆ ಪರಿಪೂರ್ಣ ಭರವಸೆ ಇದೆ. ನಿಮ್ಮ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ನಾನು ಬಹಳವಾಗಿ ಪ್ರೋತ್ಸಾಹ ಹೊಂದಿ, ನಮಗೆ ಬಂದಿದ್ದ ಎಲ್ಲಾ ಸಂಕಟಗಳಲ್ಲಿ ನಾವು ನಿಮ್ಮಿಂದ ಮಿತಿಯಿಲ್ಲದಷ್ಟು ಆನಂದಪಡುತ್ತಿದ್ದೇನೆ.


ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.


ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.


ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.


“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”


ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.


ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.


ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತೇನೆ.


ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು