Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:21 - ಕನ್ನಡ ಸಮಕಾಲಿಕ ಅನುವಾದ

21 ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಸಗ್ಳಿ ಲೊಕಾ ಎಕ್ ಹೊವ್ನ್ ರ್‍ಹಾಯ್‍ ಸಾರ್ಕೆ ಹೊಂವ್ದಿತ್ ಮನುನ್ ಮಿಯಾ ಮಾಗ್ತಾ. ಬಾಬಾ! ಕಶೆ ತಿಯಾ ಮಾಜ್ಯಾ ಭುತ್ತುರ್ ಹಾಸ್, ಅನಿ ಮಿಯಾ ತುಜೆ ಭುತ್ತುರ್ ಹಾಂವ್. ತಸೆಚ್ ತೆನಿಬಿ ಅಮ್ಚ್ಯಾ ಭುತ್ತುರ್ ಎಕ್ ಹೊವ್ನ್ ರ್‍ಹಾಯ್ ಸರ್ಕೆ ಹೊಂವ್ದಿತ್. ಅಶೆ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ಹ್ಯೊ ಜಗ್ ವಿಶ್ವಾಸ್ ಕರಿ ಸರ್ಕೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:21
37 ತಿಳಿವುಗಳ ಹೋಲಿಕೆ  

ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು.


ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.


ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.


“ಆದರೆ ಇವರಿಗಾಗಿ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನಲ್ಲಿ ನಂಬುವವರಿಗಾಗಿಯೂ ಬೇಡಿಕೊಳ್ಳುತ್ತೇನೆ.


ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.


ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು