Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:25 - ಕನ್ನಡ ಸಮಕಾಲಿಕ ಅನುವಾದ

25 “ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಬರ್‍ಯಾ ಬಾಬಾ! ಹ್ಯೊ ಜಗ್ ತುಕಾ ವಳ್ಕಿನಾ, ಖರೆ ಮಿಯಾ ತುಕಾ ವಳಕ್ತಾ. ಅನಿ ಹೆಂಕಾ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:25
37 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.


ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.


ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.


ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.


ಅರ್ಥಮಾಡಿಕೊಳ್ಳುವವನು ಒಬ್ಬನೂ ಇಲ್ಲ. ದೇವರನ್ನು ಹುಡುಕುವವನು ಒಬ್ಬನೂ ಇಲ್ಲ.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.


ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.


ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.


ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.


ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು