Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:1 - ಕನ್ನಡ ಸಮಕಾಲಿಕ ಅನುವಾದ

1 ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಹಿ ಮಾಗ್ನಿ ಸಾಂಗುನ್ ಹೊಲ್ಲ್ಯಾ ತನ್ನಾ, ತೊ ಅಪ್ನಾಚ್ಯಾ ಶಿಸಾಕ್ನಿ ವಾಂಗ್ಡಾ ಘೆವ್ನ್ ಕೆದ್ರೊನ್ ಮನ್ತಲೊ ಕರ್‍ಕೊ ದಾಟುನ್ ಗೆಲೊ, ಥೈ ಎಕ್ ಮ್ಹಳೊ ಹೊತ್ತೊ, ತೆನಿ ತ್ಯಾ ಮಳ್ಯಾತ್ ಗುಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:1
25 ತಿಳಿವುಗಳ ಹೋಲಿಕೆ  

ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.


ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು.


ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.


ಮಹಾಯಾಜಕನ ಸೇವಕರಲ್ಲಿ ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ಕಾಣಲಿಲ್ಲವೋ?” ಎಂದು ಕೇಳಿದ್ದಕ್ಕೆ,


ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕವು ತಿಳಿಯುವಂತೆ ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. “ಏಳಿರಿ, ನಾವು ಇಲ್ಲಿಂದ ಹೋಗೋಣ,” ಎಂದರು.


ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.


ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.


ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.


ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.


ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.


ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.


ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.


ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.


ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.


ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.


ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.


ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.


ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು