Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:28 - ಕನ್ನಡ ಸಮಕಾಲಿಕ ಅನುವಾದ

28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಸಕ್ಕಾಳಿ ಫಿಡೆ ನಸ್ಕಾತ್ ಜೆಜುಕ್ ಕಾಯಿಫಾಸಾಚ್ಯಾ ಘರಾತ್ನಾ ಮೊಟ್ಯಾ ಅದಿಕಾರ್‍ಯಾಚ್ಯಾ ಪಿಲಾತಾಚ್ಯಾ ಘರಾಕ್ಡೆ ಘೆವ್ನ್ ಜಾವ್ನ್ ಹೊಲೆ. ಬ‍ಸ್ಟಗಾರ್ ಹೊವ್ನ್ ಪಾಸ್ಕಾಚ್ಯಾ ಸನಾಚೆ ಬೊಕ್ಡಾಚೆ ಜೆವಾನ್ ಜೆವ್ಕ್ ಸಮಸ್ಯೆ ಹೊಯ್ಲ್ ಮನುನ್ ಜುದೆವ್ ಲೊಕಾಂಚೆ ಅದಿಕಾರಿ ರಾಜಾಚ್ಯಾ ಘರಾತ್ ಭುತ್ತುರ್ ಗುಸುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:28
33 ತಿಳಿವುಗಳ ಹೋಲಿಕೆ  

ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.


ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.


ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.


ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.


“ಸುನ್ನತಿ ಇಲ್ಲದವರ ಮನೆಯೊಳಗೆ ಹೋಗಿ ಅವರೊಂದಿಗೆ ಊಟಮಾಡಿದೆ,” ಎಂದರು.


ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಆದರೆ ಪಸ್ಕಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿಯಿದೆಯಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವುದು ನಿಮಗೆ ಇಷ್ಟವೋ?” ಎಂದು ಕೇಳಿದನು.


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.


ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು.


“ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.


ಔತಣಗಳಲ್ಲಿ ಗೇಲಿಮಾಡುವ ಕಪಟಿಗಳಂತೆ ಅವರು ನನ್ನ ಮೇಲೆ ಹಲ್ಲುಗಳನ್ನು ಕಡಿಯುತ್ತಾರೆ.


ಅವರನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.


ಸೀಮೋನ ಪೇತ್ರನು ಮತ್ತು ಇನ್ನೊಬ್ಬ ಶಿಷ್ಯನು ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದುದರಿಂದ ಯೇಸುವಿನ ಸಂಗಡ ಮಹಾಯಾಜಕನ ಅಂಗಳದೊಳಗೆ ಹೋದನು.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು