Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:38 - ಕನ್ನಡ ಸಮಕಾಲಿಕ ಅನುವಾದ

38 ಪಿಲಾತನು ಯೇಸುವಿಗೆ, “ಸತ್ಯ ಎಂದರೇನು?” ಎಂದನು. ಅವನು ಇದನ್ನು ಕೇಳಿದ ಮೇಲೆ ತಿರುಗಿ ಯೆಹೂದ್ಯರ ಬಳಿಗೆ ಹೋಗಿ ಅವರಿಗೆ, “ನಾನು ಈತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಪಿಲಾತನು - ಸತ್ಯವಂದರೇನು? ಅಂದನು. ಇದನ್ನು ಹೇಳಿ ಪಿಲಾತನು ತಿರಿಗಿ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದು - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ, “ಖರೆ ಮಟ್ಲ್ಯಾರ್ ಕಾಯ್?” ಮನುನ್ ಪಿಲಾತಾನ್ ಇಚಾರ್‍ಲ್ಯಾನ್. ಮಾನಾ ಪಿಲಾತ್ ಭಾಯ್ರ್ ಲೊಕಾನಿಕ್ಡೆ ಗೆಲೊ, ಅನಿ ತೆನಿ ತೆಂಕಾ “ಮಾಕಾ ತೆಚಿ ಕಾಯ್ಬಿ ಚುಕ್ ಗಾವುಕ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:38
14 ತಿಳಿವುಗಳ ಹೋಲಿಕೆ  

ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.


ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.


ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.


ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.


ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು