Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:8 - ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಯೇಸು, “ನಾನೇ ಆತನೆಂದು ನಿಮಗೆ ಆಗಲೇ ಹೇಳಿದೆ. ನೀವು ಹುಡುಕುತ್ತಾ ಇರುವುದು ನನ್ನನ್ನಾದರೆ, ಮಿಕ್ಕ ಇವರನ್ನು ಹೋಗಬಿಡಿ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ಯೇಸು - ನಾನೇ ಅವನೆಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೇ ಹುಡುಕುವವರಾದರೆ ಇವರು ಹೋಗಬಿಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು, “ನಾನೇ ಯೇಸು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನು ಹುಡುಕುತ್ತಿದ್ದರೆ, ಉಳಿದ ಇವರನ್ನು ಹೋಗಬಿಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್,“ಮಿಯಾ ತುಮ್ಕಾ ವಾಡ್ಗೊಳುಚ್ ಸಾಂಗ್ಲಾ ಮಿಯಾಚ್ ತೊ, ಮನುನ್, ತುಮಿ ಮಾಕಾ ಹುಡ್ಕುಕ್ ಲಾಗ್ಲ್ಯಾಶಿ ಹೊಲ್ಯಾರ್, ಹ್ಯಾ ಹುರಲ್ಲ್ಯಾಕ್ನಿ ಜಾವ್ಕ್ ದಿವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:8
13 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.


ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರಿ?” ಎಂದು ಕೇಳಿದ್ದಕ್ಕೆ, ಯೇಸು ಅವನಿಗೆ, “ನಾನು ಹೋಗುವ ಕಡೆಗೆ ಈಗ ನೀನು ನನ್ನನ್ನು ಹಿಂಬಾಲಿಸಲಾರೆ, ನಂತರ ಹಿಂಬಾಲಿಸುವೆ,” ಎಂದರು.


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಆಗ ಯೇಸು ಅವರಿಗೆ ತಿರುಗಿ, “ನೀವು, ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು,” ಎಂದರು.


ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು