Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:13 - ಕನ್ನಡ ಸಮಕಾಲಿಕ ಅನುವಾದ

13 ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಕ್ಕೆ ಕರತರಿಸಿ ಇಬ್ರಿಯ ಮಾತಿನಲ್ಲಿ ಗಬ್ಬಥಾಯೆನಿಸಿಕೊಳ್ಳುವ ಕಲ್ಲುಹಾಸಿದ ಕಟ್ಟೆ ಎಂಬ ಹೆಸರುಳ್ಳ ಸ್ಥಳಕ್ಕೆ ಹೋಗಿ ನ್ಯಾಯಪೀಠದ ಮೇಲೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಪಿಲಾತ್ ಜೆಜುಕ್ ಘರಾತ್ನಾ ಭಾಯ್ರ್ ಹನ್ಲ್ಯಾನ್, ಅನಿ , ಮಟ್ಲ್ಯಾರ್, ಗುಂಡ್ಯಾಚೊ ಕಟ್ಟೊ “ಹೆಬ್ರೆವ್ ಬಾಶೆನ್ ತೆಕಾ ಗಬ್ಬಾಥಾ ಮನ್ತ್ಯಾತ್” ತ್ಯಾ ಜಾಗ್ಯಾ ವರ್ತಿ ಬಸುನ್ ಝಡ್ತಿ ಕರುಕ್ ಬಸ್ತಲ್ಯಾ ಜಾಗ್ಯಾರ್ ಬಸ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:13
16 ತಿಳಿವುಗಳ ಹೋಲಿಕೆ  

ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.


ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.


ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.


ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು