Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತ್ಯಾ ಜುದೆವಾನಿ “ಅಮ್ಕಾ ಎಕ್ ಖಾಯ್ದೊ ಹಾಯ್ ಅನಿ ತ್ಯಾ ಖಾಯ್ದ್ಯಾ ಪರ್‍ಕಾರ್ ಹೆಕಾ ಮರ್‍ನಾಚಿ ಶಿಕ್ಷಾ ಹೊವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಕುಚ್ ದೆವಾಚೊಲೆಕ್ ಮನುನ್ ಮಾನ್ತಾ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:7
14 ತಿಳಿವುಗಳ ಹೋಲಿಕೆ  

ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.


ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.


ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”


ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.


ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.


“ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು