Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:31 - ಕನ್ನಡ ಸಮಕಾಲಿಕ ಅನುವಾದ

31 ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ಹೆ ಲಿವಲ್ಲೆ ಎವ್ಡೆ ತುಮಿ ಜೆಜು ಮೆಸ್ಸಿಯಾ, ದೆವಾಚೊಲೆಕ್ ಮನುನ್ ವಿಶ್ವಾಸ್ ಕರುಚೆ, ಅನಿ ತುಮಿ ತ್ಯೆಚ್ಯಾ ವರ್ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಜಿವ್ ಖಮ್ವುನ್ ಘೆವ್ಸಾಟ್ನಿ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:31
36 ತಿಳಿವುಗಳ ಹೋಲಿಕೆ  

ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.


ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.


ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.


ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.


ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು.


ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.


“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:


ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


“ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು