Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:17 - ಕನ್ನಡ ಸಮಕಾಲಿಕ ಅನುವಾದ

17 ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿನ್ವೆಪಟಿ ಜೆಜುನ್, “ಸಿಮಾವ್ ಜುವಾಂವಾಚ್ಯಾ ಲೆಕಾ, ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ಜೆಜುನ್ ತಿನ್ವೆಪಟಿ “ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮನುನ್ ಇಚಾರ್‍ತಾನಾ ಪೆದ್ರುಕ್ ಜೆಜಾರ್ ದಿಸ್ಲೊ, ಅನಿ ತೆನಿ “ಧನಿಯಾ ತುಕಾ ಸಗ್ಳೆ ಗೊತ್ತ್ ಹಾಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್!” ಮನುನ್ ಮಟ್ಲ್ಯಾನ್ ಜೆಜುನ್ ತೆಕಾ,“ಮಾಜ್ಯಾ ಬಕ್ರ್ಯಾಕ್ನಿ ಚಾರ್‍ವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:17
40 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.


ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.


ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.


ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


ಪೇತ್ರನು ತಿರುಗಿ ನಿರಾಕರಿಸಿದನು. ಆಗ ಕೂಡಲೇ ಹುಂಜ ಕೂಗತೊಡಗಿತು.


ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,


ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


“ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ; ಓ ಸಾರ್ವಭೌಮ ಯೆಹೋವ ದೇವರೇ,


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.


“ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.


ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದರು.


ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು