Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:25 - ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಯೇಸು ಮಾಡಿದ್ದು ಇನ್ನೂ ಬಹಳವಿದೆ; ಅದನ್ನೆಲ್ಲಾ ಒಂದೊಂದಾಗಿ ಬರೆಯುವದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸದೆ ಹೋದೀತೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುನ್ ಕರಲ್ಲಿ ಕಾಮಾ, ಅನಿ ಲೈ ಹಾತ್ ತಿ ಸಗ್ಳಿ ಎಕಾಚ್ಯಾ ಮಾನಾ ಎಕ್ ಲಿವ್ಲ್ಯಾರ್, ತಿ ಲಿವ್‍ಸಾಟಿ ಪಾಜೆ ಹೊಲ್ಲಿ ಪುಸ್ತಕಾ ಹ್ಯಾ ಜಗಾಕುಚ್ ಅಟ್ಪಿನಸಿ ಹೊತ್ತಿ ಕಾಯ್ಕಿ ಮನುನ್ ಮಾಕಾ ದಿಸ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:25
12 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ.


ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.


ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?”


ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.


ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು