Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:10 - ಕನ್ನಡ ಸಮಕಾಲಿಕ ಅನುವಾದ

10 ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಅವನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ ಜನಕ್ಕೆ ಬೋಧಕನಾಗಿರುವ ನಿನಗೆ ಇದು ತಿಳಿಯುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುನ್ ತೆಕಾ,“ತಿಯಾ ಇಸ್ರಾಯೆಲಾತ್ ಎಕ್ ಮೊಟೊ ಶಿಕ್ವುನಾರೊ ಮಾನುಸ್, ಹೆ ತುಕಾ ಗೊತ್ತ್, ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:10
28 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.


ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ದೇವರು ನಿಜವಾಗಿಯೂ ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವರು.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.


ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.


ನಿಕೊದೇಮನು ಯೇಸುವಿಗೆ, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು