Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:27 - ಕನ್ನಡ ಸಮಕಾಲಿಕ ಅನುವಾದ

27 ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೋಹಾನನು - ಪರಲೋಕದಿಂದ ಅನುಗ್ರಹಿಸೋಣವಾದದ್ದನ್ನೇ ಹೊರತು ಮನುಷ್ಯನು ಹೆಚ್ಚೇನು ಹೊಂದಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಜುವಾಂವಾಕ್ ಜವಾಬ್ ದಿಲ್ಲ್ಯಾನ್, “ದೆವಾನ್ ದಿಲ್ಯಾ ಶಿವಾಯ್ ಕೊನಾಕ್ಬಿ ಕಾಯ್ಬಿ ಗಾವಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:27
27 ತಿಳಿವುಗಳ ಹೋಲಿಕೆ  

ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”


ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು.


ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.


ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.


ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಚಿತ್ತಾನುಸಾರ ಪ್ರತಿಯೊಬ್ಬನಿಗೂ ಹಂಚಿಕೊಡುತ್ತಾರೆ.


ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,


ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”


ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು