Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:31 - ಕನ್ನಡ ಸಮಕಾಲಿಕ ಅನುವಾದ

31 “ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜೊ ಕೊನ್ ವೈನಾ ಯೆತಾ ತೊ ಸಗ್ಳ್ಯಾಂಚ್ಯಾನ್ಕಿ ಮೊಟೊ, ಜೊ ಕೊನ್ ಹ್ಯಾ ಜಿಮ್ನಿಕ್ ಸಮಂದ್ ಪಡಲ್ಲೊ ಹಾಯ್, ತೊ ಹ್ಯಾ ಜಿಮ್ನಿ ವೈಲೊಚ್, ಅನಿ ಹ್ಯಾ ಜಿಮ್ನಿ ವೈಲ್ಯಾ ವಿಶಯಾತುಚ್ ತೊ ಬೊಲ್ತಾ, ಖರೆ ಜೊ ಸರ್ಗಾವೈನಾ, ಯೆಲಾ ತೊ ಸಗ್ಳ್ಯಾಂಚ್ಯಾನ್ಕಿ ವೈಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:31
22 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನೀವು ಕೆಳಗಿನವರು, ನಾನು ಮೇಲಿನವನು. ನೀವು ಈ ಲೋಕದವರು, ನಾನು ಈ ಲೋಕದವನಲ್ಲ.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.


‘ನನ್ನ ತರುವಾಯ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದವರು ಇವರೇ.


“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.


ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು