Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:21 - ಕನ್ನಡ ಸಮಕಾಲಿಕ ಅನುವಾದ

21 ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ತಾಯಿ, ನಾನು ಹೇಳುವುದನ್ನು ಕೇಳು. ಪಿತನ ಆರಾಧನೆಗೆ ಈ ಬೆಟ್ಟಕ್ಕೂ ಬರಬೇಕಾಗಿಲ್ಲ; ಜೆರುಸಲೇಮಿಗೂ ಹೋಗಬೇಕಾಗಿಲ್ಲ. ಅಂಥ ಕಾಲವೂ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಆಕೆಗೆ - ಅಮ್ಮಾ, ನಾನು ಹೇಳುವ ಮಾತನ್ನು ನಂಬು; ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ ಈ ಬೆಟ್ಟಕ್ಕೂ ಹೋಗುವದಿಲ್ಲ, ಯೆರೂಸಲೇವಿುಗೂ ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು, “ಅಮ್ಮಾ, ನನ್ನನ್ನು ನಂಬು! ನೀವು ಇನ್ನೆಂದಿಗೂ ತಂದೆಯನ್ನು (ದೇವರನ್ನು) ಜೆರುಸಲೇಮಿನಲ್ಲಾಗಲಿ ಈ ಗುಡ್ಡದ ಮೇಲಾಗಲಿ ಆರಾಧಿಸಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ತಿಕಾ, “ಮಾಜೆ ವರ್ತಿ ವಿಶ್ವಾಸ್ ಕರ್, ಎಕ್ ಎಳ್ ಯೆತಾ ತನ್ನಾ ಲೊಕಾ ಮಡ್ಡಿ ವರ್ತಿ ಹೊಂವ್ದಿ, ಜೆರುಜಲೆಮಾತ್ ಹೊಂವ್ದಿತ್ ದೆವಾ ಬಾಬಾಚೆ ಆರಾದಾನ್ ಕರಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:21
20 ತಿಳಿವುಗಳ ಹೋಲಿಕೆ  

ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.


ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.


ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


“ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ.


“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು