Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:32 - ಕನ್ನಡ ಸಮಕಾಲಿಕ ಅನುವಾದ

32 ಆದರೆ ಯೇಸು ಅವರಿಗೆ, “ನಿಮಗೆ ತಿಳಿಯದಿರುವ ಆಹಾರವು ನನ್ನಲ್ಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಗ ಯೇಸು, “ನಿಮಗೆ ತಿಳಿಯದಂಥ ಆಹಾರ ನನ್ನಲ್ಲಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ಆತನು ಅವರಿಗೆ - ನಿಮಗೆ ತಿಳಿಯದಂಥ ಆಹಾರವು ನನಗುಂಟು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದಕ್ಕೆ ಯೇಸು, “ನನ್ನಲ್ಲಿ ಆಹಾರವಿದೆ. ಆ ಆಹಾರದ ಬಗ್ಗೆ ನಿಮಗೇನೂ ಗೊತ್ತಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ತೆನಿ ತೆಂಕಾ, “ಮಾಜಾಕ್ಡೆ ಜೆವಾನ್ ಹಾಯ್ ತ್ಯೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ನಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:32
13 ತಿಳಿವುಗಳ ಹೋಲಿಕೆ  

ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!


ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.


ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.


ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ. ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.


ಶಿಷ್ಯರು, “ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು