Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:42 - ಕನ್ನಡ ಸಮಕಾಲಿಕ ಅನುವಾದ

42 ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ತೆನಿ ತ್ಯಾ ಬಾಯ್ಕೊಮನ್ಸಿಕ್, “ಅಮಿ ಅತ್ತಾ ವಿಶ್ವಾಸ್, ಕರ್‍ತಾವ್, ಖಾಲಿ ತಿಯಾ ಸಾಂಗಲ್ಲ್ಯಾ ಗೊಸ್ಟಿ ವೈನಾ ನ್ಹಯ್, ಅಮಿ ಅಮ್ಚ್ಯಾ ಕಾನಾನಿ ತೆನಿ ಸಾಂಗ್ತಲಿ ಖಬರ್ ಆಯಿಕ್ಲಾಂವ್, ಅನಿ ಹ್ಯೊಚ್ ಹ್ಯಾ ಜಗಾಚೊ ರಾಕ್‍ನ್ದಾರ್ ಮನುನ್ ಅಮ್ಕಾ ಕಳ್ಳೆ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:42
23 ತಿಳಿವುಗಳ ಹೋಲಿಕೆ  

ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.


ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ಇನ್ನೂ ಹೆಚ್ಚು ಜನರು ಯೇಸುವಿನ ವಾಕ್ಯದ ದೆಸೆಯಿಂದ ನಂಬಿದರು.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


“ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು