Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:40 - ಕನ್ನಡ ಸಮಕಾಲಿಕ ಅನುವಾದ

40 ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದರೂ ಜೀವ ಹೊಂದುವದಕ್ಕಾಗಿ ನನ್ನ ಬಳಿಗೆ ಬರುವದಕ್ಕೆ ನಿಮಗೆ ಮನಸ್ಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಅಜುನ್‍ಬಿ ತುಮ್ಕಾ ಜಿವ್ ಕಮ್ವುನ್ ಘೆವ್‍ಸಾಟ್ನಿ ಮಾಜ್ಯಾಕ್ಡೆ ಯೆವ್ಕ್ ಮನ್‍ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:40
23 ತಿಳಿವುಗಳ ಹೋಲಿಕೆ  

ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.


ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


“ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ; ಇಸ್ರಾಯೇಲು ನನಗೆ ಅಧೀನವಾಗಲಿಲ್ಲ.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


“ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ.


ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು