Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:29 - ಕನ್ನಡ ಸಮಕಾಲಿಕ ಅನುವಾದ

29 ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೇಸು - ದೇವರು ಮೆಚ್ಚುವ ಕೆಲಸ ಯಾವದಂದರೆ ಆತನು ಕಳುಹಿಸಿಕೊಟ್ಟವನನ್ನು ನೀವು ನಂಬುವದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜುನ್ ತೆಂಕಾ, “ದೆವಾಕ್ ಪಾಜೆ ಹೊಲ್ಲೆ ಕಾಯ್ ಮಟ್ಲ್ಯಾರ್ ತೆನಿ ಧಾಡುನ್ ದಿಲ್ಲ್ಯಾಚ್ಯಾ ವರ್ತಿ ವಿಶ್ವಾಸ್, ಕರ್‍ತಲೆ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:29
21 ತಿಳಿವುಗಳ ಹೋಲಿಕೆ  

ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.


“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ.


ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು