Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:7 - ಕನ್ನಡ ಸಮಕಾಲಿಕ ಅನುವಾದ

7 ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ಫಿಲಿಪ್ಪನು - ಒಬ್ಬೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೆ ಇನ್ನೂರು ಹಣದ ರೊಟ್ಟಿಯಾದರೂ ಸಾಲದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಫಿಲಿಪಾನ್ ಜವಾಬ್ ದಿಲ್ಲ್ಯಾನ್, “ಹಿತ್ತೆ ಹೊತ್ತ್ಯಾ ಹರಿ ಎಕ್ಲ್ಯಾಕ್ನಿ ಉಲ್ಲೆ-ಉಲ್ಲೆಚ್ ಮಟ್ಲ್ಯಾರ್‍ಬಿ ಭಾಕ್ರಿಯಾ ಇಕಾತ್ ಘೆವ್ಕ್ ದೊನ್ಸೆ ಚಾಂದಿಚೆ ಪೈಸೆ ಲಾಗ್ತ್ಯಾತ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:7
10 ತಿಳಿವುಗಳ ಹೋಲಿಕೆ  

ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು.


“ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.


“ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.


ಅವನ ಸೇವಕನು, “ಇದನ್ನು ನೂರು ಮಂದಿಗೆ ಬಡಿಸುವುದು ಹೇಗೆ?” ಎಂದನು. “ ‘ತಿನ್ನಲು ಜನರಿಗೆ ನೀಡು, ಅವರು ತಿಂದು ಅನಂತರ ಉಳಿಯುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಎಲೀಷನು ಉತ್ತರಕೊಟ್ಟನು.


ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.


ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


“ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.


ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು