Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:12 - ಕನ್ನಡ ಸಮಕಾಲಿಕ ಅನುವಾದ

12 ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಥೈ ಲೊಕಾಂಚ್ಯಾ ತಾಂಡ್ಯಾತ್ ಜೆಜುಚ್ಯಾ ವಿಶಯಾತ್ ಲೈ ಪುಸ್ಪುಸುನ್ ಬೊಲುಲಾಗಲ್ಲ್ಯಾನಿ. ಉಲ್ಲ್ಯಾ ಲೊಕಾನಿ “ತೊ ಬರೊ ಮಾನುಸ್” ಮಟ್ಲ್ಯಾನಿ ಅನಿ ಹುರಲ್ಲ್ಯಾನಿ, “ನಾ, ತೊ ಲೊಕಾಕ್ನಿ ಪಸ್ವುಲಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:12
20 ತಿಳಿವುಗಳ ಹೋಲಿಕೆ  

ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.


ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ?


ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.


ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.


ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು.


ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.


ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.


ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು.


ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.


ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.


ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು