Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಯೇಸುವಿನ ಸಹೋದರರು, “ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನ ತಮ್ಮಂದಿರು ಆತನಿಗೆ - ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ತೆಚ್ಯಾ ಭಾವಾನಿ ತೆಕಾ “ತಿಯಾ ಹಿತ್ತೆತ್ನಾ ಭಾಯ್ರ್ ಜಾವ್ನ್ ಜುದೆಯಾಕ್ ಚಲ್ ಅಶೆಚ್ ತಿಯಾ ಕರ್‍ತೆ ತಿ ಅಜಾಪಾ ತುಜ್ಯಾ ಫಾಟ್ನಾ ಹೊತ್ತಿ ಲೊಕಾ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:3
17 ತಿಳಿವುಗಳ ಹೋಲಿಕೆ  

ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.


ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.


ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.


ಆದರೆ ಯೇಸುವಿನ ಸಹೋದರರು ಹಬ್ಬಕ್ಕೆ ಹೋದರು. ಯೇಸು ಸಹ ಬಹಿರಂಗವಾಗಿ ಹೋಗದೆ ರಹಸ್ಯವಾಗಿ ಅಲ್ಲಿಗೆ ಹೋದರು.


ಯೇಸುವಿನ ತಾಯಿ ಮತ್ತು ಸಹೋದರರು ಅವರಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಅವರ ಬಳಿಗೆ ಹೋಗಲಾರದೆ ಇದ್ದರು.


ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು.


ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.


ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.


ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.


ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.


ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.


ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.


ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.


ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮನ್ನು ಕಾಣಬೇಕೆಂದು, ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು