Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತೆನಿ ತೆಕಾ ಧರುಕ್ ಬಗಟ್ಲ್ಯಾನಿ, ಖರೆ ಕೊನಾಕ್ಬಿ ತೆಕಾ ಹಾತ್ ಲಾವುಕ್ ಹೊವುಕ್ನಾ, ಕಶ್ಯಾಕ್ ಮಟ್ಲ್ಯಾರ್ ಅಜುನ್ ತೆಚೊ ಎಳ್ ಯೆವ್ಕ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:30
22 ತಿಳಿವುಗಳ ಹೋಲಿಕೆ  

ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.


ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.


ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.


ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು.


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.


ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.


ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.


ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು