Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:37 - ಕನ್ನಡ ಸಮಕಾಲಿಕ ಅನುವಾದ

37 ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಸನಾಚ್ಯಾ ಆಕ್ರಿಚ್ಯಾ ಅನಿ ಲೈ ಮಹತ್ವಾಚ್ಯಾ ದಿಸಿ ಜೆಜು ಇಬೆ ರ್‍ಹಾಲೊ ಅನಿ ಮೊಟ್ಯಾನ್, “ಜೆ ಕೊನ್ ಸೊಸೆನ್ ಹಾತ್ ತೆನಿ ಮಾಜಾಕ್ಡೆ ಯೆಂವ್ದಿತ್ ಅನಿ ಫಿಂವ್ದಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:37
50 ತಿಳಿವುಗಳ ಹೋಲಿಕೆ  

ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?


ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.


ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


“ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು.


ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.


ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.


ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,


ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.


“ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.


ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ,


“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.


ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ,


ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?


ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂಥ ಸಮಸ್ತ ಜೀವಿಗಳು ಬದುಕುವುವು ಮತ್ತು ಮೀನುಗಳ ಬಹುದೊಡ್ಡ ಸಮೂಹವಾಗುವುವು. ಏಕೆಂದರೆ ಈ ನೀರು ಅಲ್ಲಿಗೆ ಬರುವಾಗ ಅವು ಶುದ್ಧವಾಗುವುವು. ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವುವು.


ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.


ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು