Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:39 - ಕನ್ನಡ ಸಮಕಾಲಿಕ ಅನುವಾದ

39 ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜು ಆತ್ಮ್ಯಾಚ್ಯಾ ವಿಶಯಾತ್ ಬೊಲ್ಲ್ಯಾನ್. ಹೆ ಅಪ್ನಾಚ್ಯಾ ವರ್ತಿ ವಿಶ್ವಾಸ್ ಕರ್‍ತಲ್ಯಾಕ್ನಿ ಗಾವ್ತಲೆ ಹೊತ್ತೆ. ಪವಿತ್ರ್ ತ್ಯಾ ಎಳಾರ್ ಅಜುನ್ ಪವಿತ್ರ್ ಆತ್ಮ್ಯಾಕ್ ದಿಲ್ಲೆ ನತ್ತೆ, ಕಶ್ಯಾಕ್ ಮಟ್ಲ್ಯಾರ್, ಅಜುನ್ ಬಿ ಜೆಜುಕ್ ಮಹಿಮೆಚ್ಯಾ ವಾಂಗ್ಡಾ ಉಟ್ವಲ್ಲೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:39
42 ತಿಳಿವುಗಳ ಹೋಲಿಕೆ  

“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.


ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.


ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೆ ಪವಿತ್ರಾತ್ಮ ದೇವರಿಂದ ಜೀವವನ್ನು ಉಂಟುಮಾಡುವ ಸೇವೆಯು ಎಷ್ಟೋ ಹೆಚ್ಚಾಗಿ ಮಹಿಮೆಯುಳ್ಳದ್ದಾಗಿರಬೇಕು?


ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.


ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.


ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.


ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.


ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.


ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.


ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.


ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.


ಅವರು ನನ್ನನ್ನು ಮಹಿಮೆಪಡಿಸುವರು. ಏಕೆಂದರೆ ಅವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


“ನೀವು ವಿಶ್ವಾಸವನ್ನಿಟ್ಟಾಗ ಪವಿತ್ರಾತ್ಮರನ್ನು ಪಡೆದುಕೊಂಡಿರೋ?” ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಅವರು, “ಇಲ್ಲ, ಪವಿತ್ರಾತ್ಮ ಇದ್ದಾರೆಂಬುದನ್ನು ನಾವು ಕೇಳಿಯೇ ಇಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು