Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:7 - ಕನ್ನಡ ಸಮಕಾಲಿಕ ಅನುವಾದ

7 ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯೊ ಜಗ್ ತುಮ್ಚೊ ದ್ವೆಸ್ ಕರಿನಾ ಖರೆ ತೊ ಮಾಜೊ ದ್ವೆಸ್ ಕರ್‍ತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚಿ ವಾಟಾ ಬುರ್ಶ್ಯಾ ಹಾತ್ ಮನುನ್ ಸಾಂಗುಂಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:7
27 ತಿಳಿವುಗಳ ಹೋಲಿಕೆ  

ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.


ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?


ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,


ಏಕೆಂದರೆ, ನಾನು ಮಾತನಾಡುವವನಾದ್ದರಿಂದ ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ. ಅವನು ಜ್ಞಾನಿಗಳಿಂದ ದೂರವಿರುತ್ತಾನೆ.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ.


ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು, ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿ ಮಾಂಸವು ಇದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು