Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತಿನಿ, “ನಾ, ಕೊನ್ಬಿ ನಾ ಸಾಯ್ಬಾ” ಮನುನ್ ಜಬಾಬ್ ದಿಲಿನ್, ತನ್ನಾ ಜೆಜುನ್ ತಿಕಾ “ತಸೆಜಾಲ್ಯಾರ್ ಮಿಯಾಬಿ ತುಕಾ ಚುಕಿದಾರ್ ಮನಿನಾ ಜಾ, ಖರೆ ಅನಿ ಫಿಡೆ ಪಾಪ್ ಕರುನಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:11
27 ತಿಳಿವುಗಳ ಹೋಲಿಕೆ  

ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.


ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.


ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


“ಒಂದು ವೇಳೆ, ಯಾರಾದರೂ ದೇವರಿಗೆ, ‘ನಾನು ಪಾಪಮಾಡಿದ್ದೇನೆ, ಆದರೆ ಇನ್ನು ಮುಂದೆ ಪಾಪಮಾಡುವುದಿಲ್ಲ.


ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.


ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ?


ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು