Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:20 - ಕನ್ನಡ ಸಮಕಾಲಿಕ ಅನುವಾದ

20 ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜು ದೆವಾಚ್ಯಾ ಗುಡಿತ್ ಹಿ ಸಗ್ಳಿ ಗೊಸ್ಟಿಯಾ ಶಿಕ್ವುತಾನಾ ಕಾನಿಕಾಚೆ ಡಬ್ಬೆ ಥವಲ್ಲ್ಯಾ ಖೊಲಿತ್ ಹೊತ್ತೊ ಖರೆ ಕೊನ್ ಬಿ ತೆಕಾ ಧರುಕ್ ನಾತ್. ಕಶ್ಯಾಕ್ ಮಟ್ಲ್ಯಾರ್ ತೆಚೊ ಎಳ್ ಅಜುನ್ ಯೆವ್ನಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:20
17 ತಿಳಿವುಗಳ ಹೋಲಿಕೆ  

ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.


ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು.


ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.


ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.


ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.


ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.


ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು.


ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಯೇಸು ಗಮನಿಸುತ್ತಿರುವಾಗ, ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ದೇವಾಲಯದ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡರು.


ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.


ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.


ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು