Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:28 - ಕನ್ನಡ ಸಮಕಾಲಿಕ ಅನುವಾದ

28 ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತಸೆಮನುನ್ ಜೆಜುನ್ ತೆಂಕಾ, “ತುಮಿ ಮಾನ್ಸಾಚ್ಯಾಲೆಕಾಕ್ ವೈರ್ ಉಕಲಲ್ಲ್ಯಾ ತನ್ನಾ, ಮಿಯಾ ಕೊನ್ ಮನುನ್ ತುಮ್ಕಾ ಕಳ್ತಾ. ಖರೆ ಮಿಯಾ ಕರ್‍ತಲೆ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಕಾಯ್ ಬಿ ಕರಿನಾ ಹೊಲಾ ಮನುನ್ ತುಮ್ಕಾ ಕಳ್ತಾ. ಮಿಯಾ ಖಾಲಿ ಮಾಜ್ಯಾ ಬಾಬಾನ್ ಮಾಕಾ ಸಾಂಗುನ್ ಧಾಡಲ್ಲ್ಯಾ ಸರ್ಕೆ ಸಾಂಗುಲಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:28
28 ತಿಳಿವುಗಳ ಹೋಲಿಕೆ  

ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.


ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ


ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.


ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ಯೇಸು ಆಕೆಗೆ, “ನಿನ್ನೊಂದಿಗೆ ಮಾತನಾಡುವ ನಾನೇ ಆತನು!” ಎಂದರು.


ಯೇಸು ತಂದೆಯ ವಿಷಯವಾಗಿ ಅವರೊಂದಿಗೆ ಮಾತನಾಡಿದರೆಂದು ಅವರು ತಿಳಿಯಲಿಲ್ಲ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.


“ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.


ಹೀಗೆ ಯೇಸು ತಾನು ಎಂಥಾ ಮರಣದಿಂದ ಸಾಯಲಿದ್ದೇನೆಂಬುದನ್ನು ಸೂಚಿಸಿ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು