Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:37 - ಕನ್ನಡ ಸಮಕಾಲಿಕ ಅನುವಾದ

37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀವು ಅಬ್ರಹಾಮನ ಸಂತಾನದವರು ನಿಜ; ಆದರೂ ನನ್ನ ವಾಕ್ಯವು ನಿಮ್ಮಲ್ಲಿ ಸಾಗದೆ ಇರುವ ಕಾರಣ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತುಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಮನುನ್ ಮಾಕಾ ಗೊತ್ತ್ ಹಾಯ್. ಅಜುನ್ ಬಿ ತುಮಿ ಮಾಕಾ ಜಿವಾನಿ ಮಾರುಕ್ ಮನುನ್ ಬಗುಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತುಮಿ ಮಿಯಾ ಶಿಕ್ವಲ್ಲೆ ಮಾನುನ್ ಘೆಯ್ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:37
22 ತಿಳಿವುಗಳ ಹೋಲಿಕೆ  

ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.


ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.


ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.


ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.


ಆಮೇಲೆ ಯೆರೂಸಲೇಮಿನ ಕೆಲವರು, “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.


ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.


‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.


ಮಕ್ಕಳೇ, ನೀವು ತಂದೆಯನ್ನು ತಿಳಿದುಕೊಂಡಿರುವುದರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಬಲ ಹೊಂದಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಿಮಗೆ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು