Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:47 - ಕನ್ನಡ ಸಮಕಾಲಿಕ ಅನುವಾದ

47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಜೆ ಕೊನ್ ದೆವಾಕ್ನಾ ಯೆತಾ ತೊ ದೆವಾಚ್ಯಾ ಗೊಸ್ಟಿಯಾ ಆಯಿಕ್ತಾ. ತುಮಿ ದೆವಾಕ್‍ ಸಮಂದ್ ಪಡಲ್ಲೆ ನ್ಹಯ್, ತಸೆಮನುನ್ ತುಮಿ ಮಾಜಿ ಗೊಸ್ಟಿಯಾ ಆಯ್ಕಿನ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:47
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.


ಆದರೆ ನಾನು ಸತ್ಯವನ್ನು ಹೇಳುವವನಾದ್ದರಿಂದ ನೀವು ನನ್ನನ್ನು ನಂಬುವುದಿಲ್ಲ.


ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು