Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:53 - ಕನ್ನಡ ಸಮಕಾಲಿಕ ಅನುವಾದ

53 ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 “ಅಮ್ಚೊ ಬಾಬಾ ಅಬ್ರಾಹಾಮ್ ಮರುನ್ ಗೆಲೊ, ತಿಯಾ ಕಾಯ್ ಅಬ್ರಾಮಾಚ್ಯಾನ್ಕಿ ಮೊಟೊ ಕಾಯ್? ಅನಿ ಪ್ರವಾದಿಬಿ ಮರುನ್ ಗೆಲೆ. ತಿಯಾ ಕೊನ್ ಮನುನ್ ಚಿಂತುಲೆ ತಿಯಾ?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:53
14 ತಿಳಿವುಗಳ ಹೋಲಿಕೆ  

ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.


ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.


ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.


ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.


ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು