Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:16 - ಕನ್ನಡ ಸಮಕಾಲಿಕ ಅನುವಾದ

16 ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಉಲ್ಲಿ ಫಾರಿಜೆವಾನಿ " ಹೆ ಕರಲ್ಲೊ ಮಾನುಸ್ ದೆವಾಕ್ ನಾ ಯೆಲ್ಲೊ ನ್ಹಯ್," ತೊ ಸಬ್ಬಾತಾಚೊ ಖಾಯ್ದೊಚ್ ಪಾಳಿನಾ, ಮಟ್ಲ್ಯಾನಿ. ಖರೆ ಅನಿ ಉಲ್ಲ್ಯಾನಿ " ಎಕ್ ಪಾಪಿ ಮಾನ್ಸಾನ್ ಎವ್ಡೆ ಮೊಟೆ ಅಜಾಪ್ ಕಶೆ ಕರುಕ್ ಹೊತಾ?" ಮಟ್ಲ್ಯಾನಿ, ಅಶೆ ತೆಂಚ್ಯಾ- ತೆಂಚ್ಯಾ ಮದ್ದಿಚ್ ವಾದ್‍ವಿವಾದ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:16
18 ತಿಳಿವುಗಳ ಹೋಲಿಕೆ  

ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು.


ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.


ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ನಾನು ತಂದೆಯಲ್ಲಿಯೂ ತಂದೆಯು ನನ್ನಲ್ಲಿಯೂ ಇದ್ದಾರೆಂದು ಹೇಳುವಾಗ ನೀವು ನನ್ನನ್ನು ನಂಬಿರಿ, ಇಲ್ಲದಿದ್ದರೆ ಆ ಕ್ರಿಯೆಗಳನ್ನಾದರೂ ನೀವು ನಂಬಿರಿ.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.


“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.


ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.


ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.


ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು