Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:30 - ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಆ ಮನುಷ್ಯನು - ಆತನು ನನಗೆ ಕಣ್ಣುಕೊಟ್ಟರೂ ಆತನು ಎಲ್ಲಿಯವನೋ ನಿಮಗೆ ಗೊತ್ತಿಲ್ಲದೆ ಇರುವದು ಆಶ್ಚರ್ಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತ್ಯಾ ಮಾನ್ಸಾನ್, “ವಿಚಿತ್ರ್ ವಿಶಯ್ ಹೆ ತ್ಯಾ ಮಾನ್ಸಾನ್ ಮಾಜೆ ಡೊಳೆ ದಿಸಿ ಸರ್ಕೆ ಕರ್ಲ್ಯಾನ್, ಅನಿ ತೊ ಕೊನ್ ಮನುನ್ ತುಮ್ಕಾ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:30
13 ತಿಳಿವುಗಳ ಹೋಲಿಕೆ  

ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.


ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?


ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಮೋಶೆಯ ಮೂಲಕ ದೇವರು ಮಾತನಾಡಿದನೆಂದು ನಾವು ಬಲ್ಲೆವು. ಆದರೆ ಈತನು ಎಲ್ಲಿಂದ ಬಂದನೋ ನಮಗೆ ಗೊತ್ತಿಲ್ಲ,” ಎಂದರು.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು