Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:1 - ಕನ್ನಡ ಸಮಕಾಲಿಕ ಅನುವಾದ

1 ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನ್ಯಾಯಸ್ಥಾಪಕರು ಆಳುತ್ತಿದ್ದಾಗ ದೇಶದಲ್ಲಿ ಬರ ಬಂದದರಿಂದ ಯೆಹೂದಪ್ರಾಂತದ ಬೇತ್ಲೆಹೇವಿುನವನೊಬ್ಬನು ತನ್ನ ಹೆಂಡತಿ, ಇಬ್ಬರು ಕುಮಾರರು ಇವರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೆತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:1
26 ತಿಳಿವುಗಳ ಹೋಲಿಕೆ  

ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.


ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ, ದೇಶದಲ್ಲಿ ಮತ್ತೊಂದು ಬರವು ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವುದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು. ಪ್ರಯಾಣ ಮಾಡುವಾಗ ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದನು.


ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.


ದೇಶದಲ್ಲಿ ಬರವು ಘೋರವಾಗಿತ್ತು.


“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.


ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು;


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.


ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ಯೆಹೂದದ ಬೇತ್ಲೆಹೇಮಿನವನಾದ ಯೆಹೂದದ ಗೋತ್ರದ ಲೇವಿಯನಾದಂಥ ಒಬ್ಬ ಪ್ರಾಯದವನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು