Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:8
11 ತಿಳಿವುಗಳ ಹೋಲಿಕೆ  

ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಆಗ ಏಲಿಯು ಸಮುಯೇಲನನ್ನು ಕರೆದು ಅವನಿಗೆ, “ನನ್ನ ಮಗನಾದ ಸಮುಯೇಲನೇ,” ಎಂದನು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.


ಯೆಹೋವ ದೇವರು, “ಸಮುಯೇಲನೇ,” ಎಂದು ಅವನನ್ನು ತಿರುಗಿ ಕರೆದರು. ಆಗ ಸಮುಯೇಲನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ; ನನ್ನನ್ನು ಕರೆದೆಯಲ್ಲಾ,” ಎಂದನು. ಅದಕ್ಕವನು, “ನನ್ನ ಮಗನೇ, ನಾನು ಕರೆಯಲಿಲ್ಲ; ನೀನು ಹೋಗಿ ಮಲಗಿಕೋ,” ಎಂದನು.


ಇವಳು, ‘ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ನಡುವೆ ನಾನು ಹಕ್ಕಲಾರಿಸಿಕೊಳ್ಳುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೇಳಿಕೊಂಡಳು. ಸ್ವಲ್ಪ ಸಮಯ ನೆರಳಿನಲ್ಲಿ ವಿಶ್ರಮಿಸಿಕೊಂಡು, ಬೆಳಗಿನಿಂದ ಈವರೆಗೂ ಇಲ್ಲಿಯೇ ಇದ್ದಾಳೆ,” ಎಂದನು.


ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ. ಅವರ ಹಿಂದೆಯೇ ಹೋಗು, ಯಾರೂ ನಿನ್ನನ್ನು ಮುಟ್ಟದಹಾಗೆ ಅವರಿಗೆ ಆಜ್ಞಾಪಿಸಿದ್ದೇನೆ. ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ನನ್ನ ಸೇವಕರು ಸೇದಿಟ್ಟ ನೀರನ್ನು ಕುಡಿ,” ಎಂದನು.


“ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು