Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:9 - ಕನ್ನಡ ಸಮಕಾಲಿಕ ಅನುವಾದ

9 ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ. ಅವರ ಹಿಂದೆಯೇ ಹೋಗು, ಯಾರೂ ನಿನ್ನನ್ನು ಮುಟ್ಟದಹಾಗೆ ಅವರಿಗೆ ಆಜ್ಞಾಪಿಸಿದ್ದೇನೆ. ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ನನ್ನ ಸೇವಕರು ಸೇದಿಟ್ಟ ನೀರನ್ನು ಕುಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಎಲ್ಲಿ ಪೈರು ಕೊಯ್ಯುತ್ತಾರೋ ಅವರ ಹಿಂದೆ ಹೋಗಿ ತೆನೆಗಳನ್ನು ಆರಿಸಿಕೊ. ನಿನಗೆ ಯಾರೂ ತೊಂದರೆ ಕೊಡಬಾರದೆಂದು ನನ್ನ ಆಳುಗಳಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಆಳುಗಳು ತುಂಬಿಸಿರುವ ನೀರಿನ ಬಾನೆಗಳಿಂದ ಕುಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಆಳುಗಳು ಕೊಯ್ಯುವದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ದಾಹವಾದರೆ ನನ್ನ ಸೇವಕರೇ ನೀರು ತಂದು ತುಂಬಿಸಿದ ನೀರಿನ ಪಾತ್ರೆಗಳ ಬಳಿಗೆ ಹೋಗಿ ಕುಡಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:9
11 ತಿಳಿವುಗಳ ಹೋಲಿಕೆ  

ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.


ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.


ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”


ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”


ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.


ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.


ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು